|
ಮುಖಪುಟ
/ಸುದ್ದಿ
ಸಮಾಚಾರ ಕನ್ನಡ ಮಾಧ್ಯಮದವರಿಗೆ ಉದ್ಯೋಗ- ನಲ್ಲೂರು ಆಗ್ರಹ
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿಂದು ನಡೆದ ರಾಜ್ಯೋತ್ಸವ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಶಾಲೆಗಳಿಗೆ ಮಕ್ಕಳ ಕೊರತೆ ಇದೆ ಎಂದು ಮುಚ್ಚುವ ಮಾತನಾಡುವುದೇ ಸರಿಯಲ್ಲ. ಈಗ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಇದು ಉತ್ತಮ ಬೆಳವಣಿಗೆ ಎಂದರು. ಕನ್ನಡ ಮಾಧ್ಯಮ ಶಾಲೆಗಳನ್ನು ನಡೆಸಲು ಅನುಮತಿ ಪಡೆದು, ಆಂಗ್ಲ ಮಾಧ್ಯಮ ಶಾಲೆ ನಡೆಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ಮೃಧು ಧೋರಣೆ ಅನುಸರಿಸಬಾರದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಕವಿಗೋಷ್ಠಿ ಉದ್ಘಾಟಿಸಿದ ಕವಿ ಎಲ್.ಎನ್.ಮುಕುಂದರಾಜ್, ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿದರೆ ಮಕ್ಕಳು ಸಂಸ್ಕೃತಿ ಹೀನರಾಗುತ್ತಾರೆ. ಮುಂದೆ ತೊಂದರೆಗೆ ಒಳಗಾಗುವವರು ಆ ಮಕ್ಕಳ ಪಾಲಕರೆ ಎಂದು ಎಚ್ಚರಿಕೆ ನೀಡಿದರು. ಪತ್ರಕರ್ತ ಟಿ.ಎಂ. ಸತೀಶ್ ಸೇರಿದಂತೆ 15ಕ್ಕೂ ಹೆಚ್ಚು ಕವಿಗಳು ತಮ್ಮ ಕವನ ವಾಚಿಸಿದರು | |||