|
ಪಶುಪಕ್ಷಿಗಳ ಲೋಕ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ *ಟಿ.ಎಂ. ಸತೀಶ್
ಹೀಗೆ ಆನೆಗಳು ಕೋಣನಕುಂಟೆಗೋ,
ಜೆಪಿನಗರಕ್ಕೋ ಬಂದರೆ ಅದು ದೊಡ್ಡ ಸುದ್ದಿಯಾಗುತ್ತದೆ.
ಬೆಂಗಳೂರು ಬೆಳೆದಂತೆ
ಈ ಹಿಂದೆ ಅರಣ್ಯ ಇಲಾಖೆಯ
ವ್ಯಾಪ್ತಿಯಲ್ಲಿದ್ದ ಉದ್ಯಾನ ಈಗ ರಾಷ್ಟ್ರೀಯ ಮೃಗಾಲಯ ಪ್ರಾಧಿಕಾರದ ಆಡಳಿತ
ವ್ಯಾಪ್ತಿಗೆ ಒಳಪಟ್ಟಿದೆ. ಬೆಂಗಳೂರಿನಿಂದ ಕೇವಲ 21 ಕಿಲೋ ಮೀಟರ್ ದೂರದಲ್ಲಿರುವ ಈ
ರಮಣೀಯ ತಾಣ ಬಿಳಿ ಹುಲಿ,
ಮೃಗಾಲಯದ ಮತ್ತೊಂದು ಆಕರ್ಷಣೆ ಚಿಕ್ಕ ದೊಡ್ಡ ಹತ್ತಾರು ಸಂಖ್ಯೆಯಲ್ಲಿರುವ ಆನೆಗಳು. ಇಲ್ಲಿ ಮಕ್ಕಳು ಆನೆಗಳನ್ನು ಮುಟ್ಟಿ, ಆನೆಗಳ ಪಕ್ಕ ನಿಂತು ಫೋಟೋ ತೆಗೆಸಿಕೊಳ್ಳುವ ಅವಕಾಶವೂ ಉಂಟು. ಅಷ್ಟೇ ಅಲ್ಲ. 25 ರೂಪಾಯಿ ಟಿಕೆಟ್ ಕೊಂಡು ಆನೆಯ ಮೇಲೆ ಕೂತು ಒಂದು ಸುತ್ತು ಹಾಕಿಯೂ ಬರಬಹುದು. (ಮಾವುತರು ಟಿಕೆಟ್ ಇಲ್ಲದವರನ್ನೂ ಆನೆಯ ಮೇಲೆ ಕೂರಿಸಿ 25 ರೂಪಾಯಿ ಜೇಬಿಗಿಳಿಸುವು ದೃಶ್ಯ ಇಲ್ಲಿ ಸರ್ವೇಸಮಾನ್ಯ.)
ಮಕ್ಕಳಿಗೆ ಆಟ ಆಡಲೆಂದು
ಜೋಕಾಲಿ,
ಏತಪೋತ, ಜಾರುವ ಬಂಡೆ ಮೊದಲಾದ ಆಟಿಕೆಗಳೂ ಇವೆ. ಕಳೆದ
ವರ್ಷ ರಾಷ್ಟ್ರೀಯ ಉದ್ಯಾನಕ್ಕೆ ಸುಮಾರು
7.5 ಲಕ್ಷ ಪ್ರವಾಸಿಗರು ಭೇಟಿ
ಕೊಟ್ಟಿದ್ದರು. ಈ ವರ್ಷ ಎಂಟೂವರೆ
ಅರಣ್ಯ ಇಲಾಖೆಯಿಂದ ಬೇರ್ಪಟ್ಟು ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಗೆ ಬಂದಿರುವ ಉದ್ಯಾನ, ಮುಂದಿನ ವರ್ಷಗಳಲ್ಲಿ ತನ್ನ ಖರ್ಚು ವೆಚ್ಚಕ್ಕೆ ತಾನೇ ಸಂಪನ್ಮೂಲ ಕ್ರೋಡೀಕರಿಸಿಕೊಳ್ಳಬೇಕಾಗಿರುವುದರಿಂದ ಪ್ರವೇಶ ದರ ಹೆಚ್ಚಿಸುವ ಇರಾದೆಯೂ ಪ್ರಾಧಿಕಾರಕ್ಕಿದೆ ಎಂದು ಅಕಾರಿಗಳು ಹೇಳುತ್ತಾರೆ. ನಗರ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ವನ್ಯಪ್ರಾಣಿಗಳ ದರ್ಶನ ಮಾಡಿಸಲು, ಪ್ರಾಣಿಗಳ ಲಕ್ಷಣ, ಆಹಾರ, ವರ್ತನೆಯ ಬಗ್ಗೆ ಅರಿವು ಮೂಡಿಸುವುದು. ಈ ಪಟ್ಟಣದ ಸದ್ದು ಗದ್ದಲದಿಂದ ದೂರವಾಗಿ ಪ್ರಶಾಂತ ತಾಣದಲ್ಲಿ ವಿಹರಿಸ ಬಯಸುವವರಿಗೆ ಇದು ನಿಜಕ್ಕೂ ಒಂದು ಸುಂದರ ತಾಣ.
ಈ ಹೂ ಗಿಡಗಳ ಮೇಲೆ ಬಣ್ಣಬಣ್ಣದ ಚಿಟ್ಟೆಗಳು ಹಾರಾಡುವುದನ್ನು ನೋಡುವುದೇ ಒಂದು ಸೊಗಸು, ಮಕ್ಕಳಂತೂ ವಿವಿಧ ವರ್ಣದ, ವಿವಿಧ ಆಕಾರದ ಚಿಟ್ಟೆಗಳನ್ನು ನೋಡಿ ಆನಂದ ತುಂದೀಲರಾಗುತ್ತಾರೆ. ಮೊಟ್ಟೆ, ಗೂಡು, ಕಂಬಳಿ ಹುಳುವಿನ ರೂಪದಿಂದ ಚಿಟ್ಟೆ ಹೇಗಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಮಕ್ಕಳು ಇಲ್ಲಿ ಪಡೆಯಲು ಸಾಧ್ಯ. ಅಲ್ಪಾಯುಷಿಗಳಾದ ಚಿಟ್ಟೆಗಳ ಸಮಗ್ರ ಮಾಹಿತಿ ನೀಡುವ ಚಲನಚಿತ್ರ ಪ್ರದರ್ಶನವೂ ಇಲ್ಲಿದೆ. ಸಾರಿಗೆ: ಬೆಂಗಳೂರಿನ ಶಿವಾಜಿನಗರ, ಕಳಾಸಿಪಾಳ್ಯಂ ಹಾಗೂ ಬಸ್ ನಿಲ್ದಾಣದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ನೇರ ಬಸ್ ಸೌಕರ್ಯ ಇದೆ. ರಜಾ ದಿನಗಳಂದು ಹಾಗೂ ಭಾನುವಾರ ಹೆಚ್ಚುವರಿ ಬಸ್ ಸೌಕರ್ಯವನ್ನೂ ಕಲ್ಪಿಸಲಾಗಿದೆ. ನಗರದಿಂದ ಹೊರಗೆ ಕಾನನ ಪ್ರದೇಶದಲ್ಲಿರುವ ಈ ಉದ್ಯಾನಕ್ಕೆ ಮಕ್ಕಳೊಂದಿಗೆ ಹೋದರೆ ದೊರಕುವ ಆನಂದ ಅಪರಿಮಿತ. ಆದರೆ, ಮನೆಯಿಂದ ಸಾಕಷ್ಟು ನೀರು, ಆಹಾರ ಕೊಂಡೊಯ್ಯುವುದು ಉತ್ತಮ. ಇಲ್ಲಿ ಮಯೂರ ವನಶ್ರೀ ಹೊಟೆಲ್ ಹಾಗೂ ಅಂಗಡಿ ಇದೆ. ದರ ತುಸು ದುಬಾರಿ. ಡೇಟ್ ಎಕ್ಸ್ಪೈರ್ ಆದ ಖಾದ್ಯ - ಪೇಯಗಳೂ ಇಲ್ಲಿ ಮಾರಾಟಕ್ಕಿರುವ ಕಾರಣ ಪ್ರವಾಸಿಗರು ಎಚ್ಚರದಿಂದಿರುವುದು ಉತ್ತಮ. ವೀಕ್ಷಣಾ ಸಮಯ: ಬೆಳಗ್ಗೆ 9-3೦ರಿಂದ ಸಂಜೆ 5-3೦ರವರೆಗೆ ಉದ್ಯಾನ ಸಾರ್ವಜನಿಕ ವೀಕ್ಷಣೆಗೆ ಮುಕ್ತ. ಪ್ರಾಣಿಗಳಿಗೆ ಆಹಾರ ನೀಡುವುದು, ರೇಗಿಸುವುದು ನಿಷಿದ್ಧ. ಪ್ಲಾಸ್ಟಿಕ್ ಬಳಕೆ ನಿಷಿದ್ಧ:ಅಂದಹಾಗೆ ಈ ಉದ್ಯಾನ ಪ್ಲಾಸ್ಟಿಕ್ ಮುಕ್ತ ಪ್ರದೇಶ. ಇಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಕಾರಣ ಏನು ಗೊತ್ತೆ..? ಪ್ರವಾಸಿಗರು ತಿಂಡಿ ತಿಂದು ಬಿಸಾಡಿದ ಪ್ಲಾಸ್ಟಿಕ್ ಬ್ಯಾಗ್ ತಿಂದ ಜಿಂಕೆಗಳು ಇಲ್ಲಿ ಸಾವನ್ನಪ್ಪಿವೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಜಿರಾಫೆ, ಚಿಂಪಾಂಜಿ ಮೊದಲಾದ ಪ್ರಾಣಿಗಳನ್ನು ಪ್ರದರ್ಶನಕ್ಕಿಟ್ಟು, ಪ್ರವಾಸಿಗರಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಹಾಗೂ ಅನುಕೂಲತೆ ಕಲ್ಪಿಸಿದರೆ ಈ ಉದ್ಯಾನ ಮೈಸೂರು ಚಾಮರಾಜೇಂದ್ರ ಮೃಗಾಲಯದಂತೆಯೇ ವಿಶ್ವಖ್ಯಾತಿ ಪಡೆಯುವುದರಲ್ಲಿ ಸಂದೇಹವಿಲ್ಲ. ಚಂಪಕಧಾಮ: ರಾಷ್ಟ್ರೀಯ ಉದ್ಯಾನಕ್ಕೆ ಒಂದು ಕಿಲೋ ಮೀಟರ್ ದೂರದಲ್ಲಿ ಚಾಲುಕ್ಯರ ಕಾಲದ ಚಂಪಕಧಾಮ ಸ್ವಾಮಿ ದೇವಾಲಯವಿದೆ. ಅತ್ಯಂತ ಪುರಾತನವಾದ ಈ ದೇವಾಲಯದಲ್ಲಿ ಸುಂದರವಾದ ಚಂಪಕಧಾಮಸ್ವಾಮಿ ವಿಗ್ರಹ, ಲಕ್ಷೀ ದೇವಾಲಯವಿದೆ. ಸುಂದರ ಕೆತ್ತನೆಯ ಗರುಡಗಂಭ, ಪ್ರಾಚೀನ ಉತ್ಸವ ಮೂರ್ತಿಗಳು ಇಲ್ಲಿವೆ. ಬೆಟ್ಟದ ಮೇಲೆ ಪುರಾತನವಾದ ಲಕ್ಷೀನರಸಿಂಹ ಸ್ವಾಮಿ ದೇವಾಲಯವೂ ಇದೆ. ಬೆಟ್ಟವನ್ನೇರಿ ಹೋಗಲು ಮಟ್ಟಿಲುಗಳನ್ನೂ ನಿರ್ಮಿಸಲಾಗಿದೆ. ಹವ್ಯಾಸಿ ಛಾಯಾಗ್ರಾಹಕರಿಗಿದು ಸುಂದರ ತಾಣ. ಮೀನಾಕ್ಷಿ ಸುಂದರೇಶ್ವರ ದೇವಾಲಯ: ಉದ್ಯಾನದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಹುಳಿಮಾವಿನ ಬಳಿ ಸುಂದರವಾದ ಮೀನಾಕ್ಷಿ ಸುಂದರೇಶ್ವರ ದೇವಾಲಯವಿದೆ. ಹತ್ತಿರದಲ್ಲೇ ಆದಿಚುಂಚನಗಿರಿ ಮಠಕ್ಕೆ ಸೇರಿದ ಗುಹಾಂತರ ರಾಮಲಿಂಗೇಶ್ವರ ಸ್ವಾಮಿ ದೇವಾಲಯವಿದೆ. ಲಿಂಗಾಕಾರದಲ್ಲೇ ನಿರ್ಮಿಸಿರುವ ಬ್ರಹ್ಮಕುಮಾರಿ ಈಶ್ವರೀಯ ಕೇಂದ್ರವೂ ಇದೆ. ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-2352901 /2352909 /2352903 Email : kstdc@vsnl.in | |||